 : ʻಎಮರ್ಜೆನ್ಸಿʼ ರಿಲೀಸ್‌ಗೆ ಸೆನ್ಸಾರ್‌ ವಿಘ್ನ- ಕೋರ್ಟ್‌ ಮೆಟ್ಟಿಲೇರಿದ ಚಿತ್ರತಂಡ
ಮುಂಬೈ:ಬಿಜೆಪಿ ಸಂಸದೆ , ನಟಿ ಕಂಗನಾ ರಣಾವತ್‌( ) ನಟಿಸಿ ನಿರ್ದೇಶಿಸಿರುವ ಈ ವರ್ಷದ ಬಹುನಿರೀಕ್ಷಿತ ಚಿತ್ರಗಳ ಪೈಕಿ ಒಂದಾದ ಬಾಲಿವುಡ್‌ನ ‘ಎಮರ್ಜೆನ್ಸಿ’ ಸಿನಿಮಾ ( )ಕ್ಕೆ  ಆದರೆ ಸೆನ್ಸಾರ್‌ ಮಂಡಳಿ ಇನ್ನೂ ಪ್ರಮಾಣ ಪತ್ರ ನೀಡದಿರುವ ಹಿನ್ನೆಲೆ ಇದೀಗ ಚಿತ್ರತಂಡ ಬಾಂಬೆ ಹೈಕೋರ್ಟ್‌ ಮೆಟ್ಟಿಲೇರಿದೆ. ಝೀ ಎಂಟರ್‌ಟೈನ್ಮೆಂಟ್‌ ಎಂಟರ್‌ಪ್ರೈಸಸ್‌, ಚಿತ್ರ ಸಹ ನಿರ್ಮಾಪಕ ಸಿನಿಮಾ ಬಿಡುಗಡೆಗೆ ಅವಕಾಶ ಮತ್ತು ಸೆನ್ಸಾರ್‌ ಪ್ರಮಾಣಪತ್ರ ನೀಡುವಂತೆ ಕೋರಿ ಕೋರ್ಟ್‌ಗೆ ಮನವಿ ಮಾಡಿದ್ದಾರೆ.
ಹೈಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯ ಪ್ರಕಾರ, ಸೆನ್ಸಾರ್ ಮಂಡಳಿಯು ನಿರಂಕುಶವಾಗಿ ಮತ್ತು ಕಾನೂನುಬಾಹಿರವಾಗಿ ಚಿತ್ರದ ಸೆನ್ಸಾರ್ ಪ್ರಮಾಣಪತ್ರವನ್ನು ತಡೆಹಿಡಿದಿದೆ. ಸೆನ್ಸಾರ್ ಮಂಡಳಿಯು ಪ್ರಮಾಣಪತ್ರದೊಂದಿಗೆ ಸಿದ್ಧವಾಗಿದೆ ಆದರೆ ಅದನ್ನು ನೀಡುತ್ತಿಲ್ಲ ಎಂದು ಅರ್ಜಿದಾರರು ದೂರಿದ್ದು, ತುರ್ತು ವಿಚಾರಣೆಗಾಗಿ ಮನವಿ ಮಾಡಿದ್ದಾರೆ. ಇನ್ನು ಈ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಬಿ ಪಿ ಕೊಲಬಾವಾಲಾ ಮತ್ತು ಫಿರ್ದೋಶ್ ಪೂನಿವಾಲಾ ಅವರ ವಿಭಾಗೀಯ ಪೀಠದ  ವಿಚಾರಣೆ ನಡೆಸಲಿದೆ.
ಕಂಗನಾ ರಾಣಾವತ್‌ ಮೊದಲ ಬಾರಿಗೆ ಏಕಾಂಗಿಯಾಗಿ ಆ್ಯಕ್ಷನ್‌ ಕಟ್‌ ಹೇಳಿರುವ ʼಎಮರ್ಜೆನ್ಸಿʼ ಸಿನಿಮಾ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜೀವನ್ನಾಧರಿಸಿದೆ. ಅದರಲ್ಲಿಯೂ ಅವರು 1975 ರಲ್ಲಿ ಹೇರಿದ್ದ ತುರ್ತು ಪರಿಸ್ಥಿತಿಯ ಬಗ್ಗೆ ಈ ಚಿತ್ರ ಬೆಳಕು ಚೆಲ್ಲಲಿದೆ. ಇದೇ ಕಾರಣಕ್ಕೆ ಈ ಸಿನಿಮಾ ಸೆಟ್ಟೇರಿದಾಗಿನಿಂದಲೂ ಸದ್ದು ಮಾಡುತ್ತಿದೆ.
ತುರ್ತು ಪರಿಸ್ಥಿತಿಯ ದಿನಗಳನ್ನು ಆಧರಿಸಿ ಈ ಸಿನಿಮಾ ಮಾಡಲಾಗಿದೆ. ಇದು ವಿವಾದಾತ್ಮಕ ವಿಷಯ ಆದ್ದರಿಂದ ಚಿತ್ರಕ್ಕೆ ಸೆನ್ಸಾರ್ ಪ್ರಮಾಣ ಪತ್ರ ನೀಡುವುದು ಕಷ್ಟ ಆಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಸಿನಿಮಾ ವೀಕ್ಷಿಸಿದ ಸೆನ್ಸಾರ್​ ಮಂಡಳಿ  ‘ಎಮರ್ಜೆನ್ಸಿ’ ಚಿತ್ರತಂಡಕ್ಕೆ ಒಂದಷ್ಟು ಸೂಚನೆಗಳನ್ನು ನೀಡಿದೆ. ಕೆಲವು ಆಕ್ಷೇಪಾರ್ಹ ದೃಶ್ಯಗಳಿಗೆ ಕತ್ತರಿ ಹಾಕುವಂತೆ ಹೇಳಿದೆ. ಅಲ್ಲದೇ ಸಿನಿಮಾಗೆ ಯಾವ ಪ್ರಮಾಣ ಪತ್ರ ನೀಡಬೇಕು ಎಂಬುದನ್ನು ಇನ್ನೂ ನಿರ್ಧರಿಸಿಲ್ಲ. ಮಾತ್ರವಲ್ಲ ಸಿಖ್​ ಸಮುದಾಯದವರೂ ಚಿತ್ರದ ವಿರುದ್ಧ ಧ್ವನಿ ಎತ್ತಿದ್ದಾರೆ.
ಕಂಗನಾ ಹೇಳಿದ್ದೇನು?
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಂಗನಾ, ಮಧುರ್ ಭಂಡಾರ್ಕರ್ ಅವರ 2017ರ ಪಾಲಿಟಿಕಲ್ ಥ್ರಿಲ್ಲರ್ ʼಇಂದು ಸರ್ಕಾರ್ʼ ಚಿತ್ರದಲ್ಲಿ 1975 ರ ತುರ್ತು ಪರಿಸ್ಥಿತಿ ಹೇರಿಕೆ ಮತ್ತು ಕಳೆದ ವರ್ಷ ತೆರೆಕಂಡ ಮೇಘನಾ ಗುಲ್ಜಾರ್ ಅವರ ʼಸ್ಯಾಮ್ ಬಹದ್ದೂರ್ʼ ಸಿನಿಮಾದಲ್ಲಿ 1971ರ ಭಾರತ-ಪಾಕಿಸ್ತಾನ ಯುದ್ಧದ ಚಿತ್ರಣ ನೀಡಲಾಗಿದೆ. ಅವರಿಗೆ ಎದುರಾಗದ ಸಮಸ್ಯೆ ನನ್ನ ಚಿತ್ರಕ್ಕೆ ಎದುರಾಗಿದೆ. ಸೆನ್ಸಾರ್‌ ಮಂಡಳಿಯವರು ʼಎಮೆರ್ಜೆನ್ಸಿʼ ಸಿನಿಮಾವನ್ನು ವೀಕ್ಷಿಸಿ ಬಿಡುಗಡೆ ಒಪ್ಪಿಗೆ ಸೂಚಿಸಿದ್ದರೂ ಬಳಿಕ ಅನೇಕ ಆಕ್ಷೇಪ ವ್ಯಕ್ತವಾದ ಹಿನ್ನಲೆಯಲ್ಲಿ ಪ್ರಮಾಣಪತ್ರವನ್ನು ಹಿಂತೆಗೆದುಕೊಳ್ಳಲಾಗಿದೆʼʼ ಎಂದು ಅವರು ಹೇಳಿದ್ದಾರೆ.

ಈ ರೀತಿಯ ಅಡೆತಡೆಗಳಿಂದ ತಮ್ಮನ್ನು ತಡೆಯಲು ಸಾಧ್ಯವಿಲ್ಲ ಎಂದೂ ಅವರು ಗುಡುಗಿದ್ದಾರೆ. ʼʼಜನರು ನಮ್ಮನ್ನು ಹೆದರಿಸುತ್ತಲೇ ಇರುತ್ತಾರೆ. ನಾವು ಎಷ್ಟು ಸಮಯ ಹೆದರುತ್ತಲೇ ಇರುತ್ತೇವೆ? ನಾನು ಈ ಚಿತ್ರವನ್ನು ಸ್ವಾಭಿಮಾನದಿಂದ ಮಾಡಿದ್ದೇನೆ. ಅವರು ನನ್ನ ಪ್ರಮಾಣ ಪತ್ರವನ್ನು ತಡೆಹಿಡಿದಿದ್ದಾರೆ. ಆದರೆ ನಾನು ಚಿತ್ರವನ್ನು ಎಡಿಟ್‌ ಮಾಡದೆ ಬಿಡುಗಡೆ ಮಾಡಲು ನಿರ್ಧರಿಸಿದ್ದೇನೆ. ಇದಕ್ಕಾಗಿ ನಾನು ಬೇಕಾದರೆ ನ್ಯಾಯಾಲಯದಲ್ಲಿ ಹೋರಾಡಲೂ ಸಿದ್ಧ. ಇಂದಿರಾ ಗಾಂಧಿ ಅವರು ತಮ್ಮ ಮನೆಯಲ್ಲಿ ಇದ್ದಕ್ಕಿದ್ದಂತೆ ನಿಧನರಾದರು ಎಂದು ತೋರಿಸಲು ಸಾಧ್ಯವಿಲ್ಲ” ಎಂದು ಕಂಗನಾ ನುಡಿದಿದ್ದಾರೆ.
ಈ ಸುದ್ದಿಯನ್ನೂ ಓದಿ: : ಪೊಲೀಸ್‌ ಕೇಸ್‌ ಆಗ್ತಿದ್ದಂತೆ ಭಾವಿ ಅತ್ತೆ-ಮಾವ ಓಡಿ ಹೋದ್ರು- ಮದ್ವೆ ಬಗ್ಗೆ ಕಂಗನಾ ಮಾತು