ಎಐಸಿಸಿ ಖಜಾಂಚಿಯಾಗಿ ಪವನ್‌ ಕುಮಾರ್‌ ಬನ್ಸಾಲ್‌
ಅಹ್ಮದ್‌ ಪಟೇಲ್‌ ಅವರ ನಿಧನದಿಂದಾಗಿ ಸ್ಥಾನ ತೆರವಾಗಿತ್ತು. ಅಖಿಲ ಭಾರತ ಕಾಂಗ್ರೆಸ್‌ ಸಮಿತಿ(ಎಐಸಿಸಿ) ಆಡಳಿತದ ಹೊಣೆ ಹೊತ್ತಿರುವ ಬನ್ಸಾಲ್, ಮಧ್ಯಂತರ ಕ್ರಮವಾಗಿ ತಕ್ಷಣದಿಂದ ಜಾರಿಯಾಗುವಂತೆ ಹೆಚ್ಚುವರಿಯಾಗಿ ಈ ಹುದ್ದೆಯನ್ನು ವಹಿಸ ಲಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ಪ್ರಕಟಣೆಯಲ್ಲಿ ಉಲ್ಲೇಖಿಸಿದ್ದಾರೆ.