ಹಾಸ್ಯ ನಟ ಟೆನ್ನಿಸ್ ಕೃಷ್ಣ ನಾಳೆ ಆಮ್ ಆದ್ಮಿ ಪಾರ್ಟಿಗೆ ಸೇರ್ಪಡೆ
ನಟ ಟೆನ್ನಿಸ್ ಕೃಷ್ಣ ಅವರು ಇದೀಗ ರಾಜಕೀಯಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಅವರು ನಾಳೆ ಆಮ್ ಆದ್ಮಿ ಪಾರ್ಟಿಗೆ ಸೇರಲಿದ್ದಾರೆ. ಬೆಂಗಳೂರಿನಲ್ಲಿ ಆಮ್​ ಆದ್ಮಿ ಪಾರ್ಟಿಯ ಕಾರ್ಯಕ್ರಮ ನಡೆಯಲಿದ್ದು, ಈ ವೇಳೆ ಅವರು ಅಧಿಕೃತ ವಾಗಿ ಆಪ್​ ಪಕ್ಷಕ್ಕೆ ಟೆನ್ನಿಸ್ ಕೃಷ್ಣ ಅವರು ಸೇರಿಕೊಳ್ಳಲಿದ್ದಾರೆ. ಈ ವೇಳೆ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಹಾಗೂ ಇನ್ನಿತರ ಹಿರಿಯ ಮುಖಂಡರು ಉಪಸ್ಥಿ ಯಲ್ಲಿರುತ್ತಾರೆ ಎನ್ನಲಾಗಿದೆ.