ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ

ಕರ್ನಾಟಕ ಬಜೆಟ್​ 2023-24:ರಾಜ್ಯದ ಹಣಕಾಸು ಸಚಿವರೂ ಆಗಿರುವ ಬೊಮ್ಮಾಯಿ ಬಿಜೆಪಿ ಸರ್ಕಾರದ ಕೊನೇ ಹಾಗೂ 2ನೇ ಬಜೆಟ್ ಮಂಡಿಸಿದರು.
ಹೊಸ ತೆರಿಗೆ ಹೊರೆ ಹಾಕದೆ, ಜನರನ್ನು ತಮ್ಮತ್ತ ಸೆಳೆಯುವ ಜನಪ್ರಿಯ ಯೋಜನೆಗಳನ್ನು, ಘೋಷಣೆಗಳನ್ನೊಳಗೊಂಡ ಬಜೆಟ್ ಮಂಡಿಸುವತ್ತ ಸಿಎಂ ಬಸವರಾಜ ಬೊಮ್ಮಾಯಿ ಗಮನ ಹರಿಸಿದ್ದಾರೆ ಎನ್ನಲಾಗಿದೆ.
ಸಾಮಾನ್ಯವಾಗಿ ಚುನಾವಣಾ ವರ್ಷದಲ್ಲಿ ಮಂಡಿಸುವ ಬಜೆಟ್​ಗಳು ಜನಪ್ರಿಯ ಬಜೆಟ್​ಗಳೇ ಆಗಿರುತ್ತವೆ. ಬಜೆಟ್​ನಲ್ಲಿ ಸಾಮಾನ್ಯ ಜನರಿಗೆ, ಕೃಷಿಕರಿಗೆ, ಮಹಿಳೆಯರಿಗೆ, ಯುವಕರಿಗೆ ಭರ್ಜರಿ ಕೊಡುಗೆಗಳನ್ನು ನೀಡಲಾಗುತ್ತದೆ.
ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಘೋಷಿಸಲಾಗಿದೆ.