 : ವಿಜ್ಞಾನಿಗಳು ದೇಶದ ಆಸ್ತಿಯಷ್ಟೇ ಅಲ್ಲ, ಹೆಮ್ಮೆ: ಎಚ್.ಡಿ. ಕುಮಾರಸ್ವಾಮಿ
ಬೆಂಗಳೂರು:ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ( ) ಅವರು ಮಂಗಳವಾರ ಬೆಳಗ್ಗೆ ಬೆಂಗಳೂರಿನ ಎಚ್‌ಎಂಟಿ ಕ್ಯಾಂಪಸ್ಸಿನಲ್ಲಿರುವ ಭಾರತೀಯ ವಿಜ್ಞಾನ ಸಂಸ್ಥೆಯ (   ) ಶ್ರೇಷ್ಠತಾ ಕೇಂದ್ರಕ್ಕೆ ಭೇಟಿ ನೀಡಿದರು. ಈ ಕೇಂದ್ರವು ಭಾರೀ ಕೈಗಾರಿಕೆ ಸಚಿವಾಲಯದ ಅಧಿಕಾರ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಭಾರತೀಯ ವಿಜ್ಞಾನ ಸಂಸ್ಥೆಯ ನೆರವಿನೊಂದಿಗೆ ನಡೆಯುತ್ತಿದೆ. ಎಚ್‌ಎಂಟಿ ಅಧ್ಯಕ್ಷ, ವ್ಯವಸ್ಥಾಪಕ ನಿರ್ದೇಶಕ ರಾಜೇಶ್ ಕೊಹ್ಲಿ, ಸಚಿವಾಲಯದ ಉನ್ನತ ಅಧಿಕಾರಿಗಳೊಂದಿಗೆ ಸಚಿವರು ಭೇಟಿ ನೀಡಿದರು.
ಶ್ರೇಷ್ಠತಾ ಕೇಂದ್ರದಲ್ಲಿರುವ ಆರ್ಟ್ ಪಾರ್ಕ್ ( ) ಗೆ ಭೇಟಿ ನೀಡಿ, ವಿಜ್ಞಾನಿಗಳ ಜತೆ ಸಂವಾದ ನಡೆಸಿದ ಸಚಿವರು, ಇಲ್ಲಿ ಅಭಿವೃದ್ಧಿಪಡಿಸಲಾಗಿರುವ ಅತ್ಯಾಧುನಿಕ ಕೃಷಿ ತಂತ್ರಜ್ಞಾನ ಸಲಕರಣೆಗಳನ್ನು ವೀಕ್ಷಿಸಿ, ಸಂತಸ ವ್ಯಕ್ತಪಡಿಸಿದರು.
ಪ್ರಮುಖವಾಗಿ ಅತ್ಯಾಧುನಿಕ  (  ) ವಾಹನವನ್ನು ವೀಕ್ಷಿಸಿದ ಸಚಿವರು, ಕೆಲ ಹೊತ್ತು ಅದರ ಮೇಲೆ ಸವಾರಿ ನಡೆಸಿದರು. ಕೃಷಿ ಉದ್ದೇಶಕ್ಕೆ ಬಳಸಬಹುದಾದ ಈ ವಾಹನವನ್ನು ಎಂತಹುದೇ ದುರ್ಗಮ ಪ್ರದೇಶದಲ್ಲಿಯೂ ಬಳಕೆ ಮಾಡಬಹುದಾಗಿದೆ. ಪ್ರಮುಖವಾಗಿ ಅಡಿಕೆ, ಕಾಫಿ, ಚಹಾ, ತೆಂಗು ಸೇರಿದಂತೆ ನಾನಾ ವಾಣಿಜ್ಯ ಬೆಳಗಳನ್ನು ಬೆಳೆಯುವ ರೈತರಿಗೆ ಈ ವಾಹನ ಅನುಕೂಲವಾಗುತ್ತದೆ. ಎತ್ತರದ, ಕಡಿದಾದ ಪ್ರದೇಶಗಳಲ್ಲಿ ಈ ವಾಹನ ಬಳಕೆ ಮಾಡಬಹುದು ಎಂದು ವಿಜ್ಞಾನಿಗಳು ಸಚಿವರಿಗೆ ವಿವರಿಸಿದರು.
ಬಳಿಕ ಸಚಿವರು ಡ್ರೋನ್‌ಗಳ ಆವಿಷ್ಕಾರದಲ್ಲಿ ವಿಜ್ಞಾನಿಗಳ ಸಾಧನೆಯನ್ನು ಕಂಡು ಚಕಿತರಾದರು. ಅಲ್ಲದೆ, ತಾವೂ ಕುತೂಹಲದಿಂದ ಹೊಸ ತಲೆಮಾರಿನ ಅತ್ಯಾಧುನಿಕ ಡ್ರೋನ್ ಅನ್ನು ಹಾರಿಸಿ ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಿದರು. ಅಲ್ಲದೆ ವಿವಿಧ ನಮೂನೆಯ, ವಿವಿಧ ಉದ್ದೇಶಗಳಿಗೆ ಬಳಕೆಯಾಗುವ ಡ್ರೋನ್‌ಗಳನ್ನು ವೀಕ್ಷಿಸಿದರು. ರೋಬೋಟಿಕ್ ವಿಭಾಗದಲ್ಲಿ ಕೃಷಿಗೂ ಬಳಕೆ ಮಾಡಲಾಗುವ ರೋಬೋಟ್‌ಗಳನ್ನು ಸಚಿವರು ವೀಕ್ಷಿಸಿದರು.
ಇದೇ ಸಂದರ್ಭದಲ್ಲಿ ತರುಣ ವಿಜ್ಞಾನಿಗಳ ಜತೆ ಸಂವಾದ ನಡೆಸಿದ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರು; ನಿಮ್ಮ ಸಂಶೋಧನೆ, ಆವಿಷ್ಕಾರಗಳನ್ನು ಕಂಡು ಚಕಿತನಾಗಿದ್ದೇನೆ. ನಿಮ್ಮೆಲ್ಲರ ಸಾಧನೆಯನ್ನು ಕಂಡು ನನಗೆ ಹೆಮ್ಮೆ ಎನಿಸಿದೆ. ವಿಜ್ಞಾನಿಗಳು ನೀವು ದೇಶದ ಆಸ್ತಿ ಮತ್ತು ನಮ್ಮ ಪಾಲಿನ ಹೆಮ್ಮೆ ಎಂದು ಸಂತೋಷ ವ್ಯಕ್ತಪಡಿಸಿದರು.
ಈ ಸುದ್ದಿಯನ್ನೂ ಓದಿ | : ಮುಂದಿನ 5 ದಿನ ರಾಜ್ಯದ ಉತ್ತರ, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ
ಶ್ರೇಷ್ಠತಾ ಕೇಂದ್ರ (  ) ದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಜಯಂತಿ ಕಾರ್ಯಕ್ರಮ ಹಾಗೂ ರಾಷ್ಟ್ರೀಯ ಸ್ವಚ್ಚತಾ ದಿನ ನಿಮಿತ್ತ ಪೌರ ಕಾರ್ಮಿಕರೊಂದಿಗೆ ಸ್ವಚ್ಚತಾ ಅಭಿಯಾನದಲ್ಲಿ ಸಚಿವರು ಭಾಗವಹಿಸಿದರು.