ನೂತನ ಜಿಲ್ಲೆಗೆ ಸಿಇಒ ಆಗಿ ಕೆ.ಎಂ.ಗಾಯತ್ರಿ ನೇಮಕ
ಬೆಂಗಳೂರು :ನೂತನ ಜಿಲ್ಲೆ ವಿಜಯನಗರಕ್ಕೆ ಜಿಲ್ಲಾಧಿಕಾರಿ ನೇಮಕವಾದ ಬೆನ್ನಲ್ಲೇ ಜಿಲ್ಲೆಯ ಮೊದಲ ಸಿಇಒ ಆಗಿ ಐಎಎಸ್ ಅಧಿಕಾರಿ ಕೆ.ಎಂ.ಗಾಯತ್ರಿಯವರನ್ನು ನೇಮಕ ಮಾಡಲಾಗಿದೆ.
ಗಾಯತ್ರಿ ಅವರು ಮೈಸೂರಿನ ಅಬ್ದುಲ್‌ ನಜೀರ್‌ ಸಾಬ್‌ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಸಂಸ್ಥೆಯ ನಿರ್ದೇಶಕಿ ಯಾಗಿದ್ದು, ತಕ್ಷಣದಿಂದಲೇ ಜಾರಿಗೆ ಬರುವಂತೆ ಅವರನ್ನು ವಿಜಯನಗರ ಜಿಲ್ಲೆಗೆ ನೇಮಕ ಮಾಡಲಾಗಿದೆ.
ಜಿಲ್ಲೆಯ ಉದ್ಘಾಟನಾ ಸಮಾರಂಭ ಅ. 2ರಂದು ನಡೆಯಲಿದೆ. ಶುಕ್ರವಾರ ನೂತನ ಜಿಲ್ಲಾಧಿಕಾರಿಯಾಗಿ ಅನಿರುದ್ಧ್‌ ಪಿ. ಶ್ರವಣ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅರುಣ್‌ ಕೆ. ಅವರನ್ನು ಸರ್ಕಾರ ನೇಮಿಸಿತ್ತು. ಇದರೊಂದಿಗೆ ಹೊಸ ಜಿಲ್ಲೆಯ ಮೂರು ಪ್ರಮುಖ ಹುದ್ದೆಗಳಿಗೆ ಅಧಿಕಾರಿಗಳ ನೇಮಕ ಪ್ರಕ್ರಿಯೆ ಪೂರ್ಣಗೊಂಡಿದೆ.
