ಡಿ.28ರವರೆಗೆ ಮಾಜಿ ಸಚಿವ ವಿನಯ್‌ ಕುಲಕರ್ಣಿಗೆ ನ್ಯಾಯಾಂಗ ಬಂಧನ
ಧಾರವಾಡ:ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಯೋಗೇಶ ಗೌಡ ಗೌಡರ ಹತ್ಯೆ ಸಂಬಂಧ ಬಂಧನದಲ್ಲಿದ್ದು, ವಿಚಾರಣೆ ಎದುರಿಸುತ್ತಿರುವ ಮಾಜಿ ಸಚಿವ ವಿನಯ್‌ ಕುಲಕರ್ಣಿಗೆ ಬಿಡುಗಡೆ ಭಾಗ್ಯ ಸಿಗುತ್ತಿಲ್ಲ.
ಸೋಮವಾರ ವಿಶೇಷ ಸಿಬಿಐ ನ್ಯಾಯಾಲಯವು ವಿನಯ್‌ ಕುಲಕರ್ಣಿಯವರ ನ್ಯಾಯಾಂಗ ಬಂಧನವನ್ನು ಇದೇ ಡಿಸೆಂಬರ್‌ 28ವರೆಗೂ ವಿಸ್ತರಿಸಿ ಆದೇಶ ಹೊರಡಿಸಿದೆ.