 : ಎಲೆಕ್ಟ್ರಾನಿಕ್ ಸಿಟಿ ಜನರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಸೆರೆ
ಬೆಂಗಳೂರು:ಎಲೆಕ್ಟ್ರಾನಿಕ್ ಸಿಟಿ ಭಾಗದಲ್ಲಿ ಒಂದು ವಾರದಿಂದ ಜನರ ನಿದ್ದೆಗೆಡಿಸಿದ್ದ ಚಿರತೆ ( ) ಕೊನೆಗೂ ಸೆರೆಸಿಕ್ಕಿದೆ. ಅರಣ್ಯ ಇಲಾಖೆ ಸಿಬ್ಬಂದಿ ಇಟ್ಟಿದ್ದ ಬೋನಿಗೆ ಮಂಗಳವಾರ ಮಧ್ಯರಾತ್ರಿ 12 ಗಂಟೆ ಸುಮಾರಿಗೆ ಚಿರತೆ ಬಿದ್ದಿದೆ.
ಎಲೆಕ್ಟ್ರಾನಿಕ್ ಸಿಟಿ ಟೋಲ್‌ ಪ್ಲಾಜಾ ಸಮೀಪದ ಎನ್‌ಟಿಟಿಎಫ್‌ ಗ್ರೌಂಡ್‌ ಬಳಿ ಪ್ರತ್ಯಕ್ಷವಾಗಿದ್ದ ಚಿರತೆ, ಕಳೆದ ಒಂದು ವಾರದಿಂದ ಅಲ್ಲೇ ಸುತ್ತಮತ್ತ ಸುತ್ತಾಡುತ್ತಿದ್ದರಿಂದ ಜನರಲ್ಲಿ ಆತಂಕ ಮೂಡಿತ್ತು. ಹಲವು ಬಾರಿ ಬೋನ್ ಬಳಿ ಬರುತ್ತಿದ್ದ ಚಿರತೆ, ಬೋನಿಗೆ ಮಾತ್ರ ಬೀಳುತ್ತಿರಲಿಲ್ಲ. ಆದ್ದರಿಂದ ಕನಕಪುರದಿಂದ ವಿಶೇಷ ಬೋನು ತರಿಸಿ ಕಾರ್ಯಾಚರಣೆ ಮಾಡಲಾಗಿದ್ದು, ಬೋನಿಲ್ಲಿ ಎರಡು ಕೋಳಿಗಳನ್ನು ಇಟ್ಟು ಚಿರತೆಯನ್ನು ಸೆರೆ ಹಿಡಿಯಲಾಗಿದೆ.
ಅರಣ್ಯ ಇಲಾಖೆ ಅಳವಡಿಸಿದ್ದ ಟ್ರ್ಯಾಪ್ ಕ್ಯಾಮೆರಾದಲ್ಲಿ ಹಲವು ಬಾರಿ ಚಿರತೆ ಸೆರೆಯಾಗಿದೆ. ಬೋನಿಗೆ ಬಿದ್ದಿರುವ ಚಿರತೆಗೆ ನಾಲ್ಕರಿಂದ ಐದು ವರ್ಷ ವಯಸ್ಸು ಆಗಿರಬಹುದು ಎಂದು ಅರಣ್ಯ ಇಲಾಖೆ ಸಿಬ್ಬಂದಿ ಮಾಹಿತಿ ನೀಡಿದ್ದಾರೆ. ಈ ಚಿರತೆಯು ಬನ್ನೇರುಘಟ್ಟ ಕಾಡಿನಿಂದ ತಪ್ಪಿಸಿಕೊಂಡು ಬಂದಿರುವ ಶಂಕೆ ವ್ಯಕ್ತವಾಗಿದ್ದು, ಬನ್ನೇರುಘಟ್ಟ ಕಾಡಿನಿಂದ ಗೊಟ್ಟಿಗೆರೆ ನೈಸ್ ರೋಡ್, ಬಳಿಕ ಎಲೆಕ್ಟ್ರಾನಿಕ್ ಸಿಟಿ ಸೇರಿದೆ ಎನ್ನಲಾಗಿದೆ.
ಇದನ್ನೂ ಓದಿ |  : ನಾಳೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ
ಚಿರತೆ ಸೆರೆ ಹಿಡಿದ ಬಳಿಕ ಸಿಬ್ಬಂದಿ ಬೆಳಗ್ಗೆ ಬನ್ನೇರುಘಟ್ಟ ಉದ್ಯಾನಕ್ಕೆ ತೆಗೆದುಕೊಂಡು ಹೋಗಿದ್ದಾರೆ. ಸದ್ಯ ಚಿರತೆ ಆರೋಗ್ಯವಾಗಿದೆ ಎಂದು ಅರಣ್ಯ ಇಲಾಖೆ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.
ಬೆಂಗಳೂರು:ಉತ್ತರ ಪ್ರದೇಶ ಝಾನ್ಸಿಯಲ್ಲಿ ವರದಿಯಾದ ಘಟನೆಯೊಂದರಲ್ಲಿ ಪಿಟ್‌ಬುಲ್ ತಳಿಯ ಶ್ವಾನವೊಂದು ಅಪಾಯಕಾರಿ ಹಾಗೂ ವಿಷಕಾರಿ ಕಾಳಿಂಗ ಸರ್ಪವನ್ನು ಕಾದಾಡಿ ( ) ಕೊಂದು ಮಕ್ಕಳ ಜೀವವನ್ನು ಉಳಿಸಿದೆ.  ಈ ಘಟನೆಯ ವಿಡಿಯೊ ವೈರಲ್ ಆಗಿದ್ದು ನಾಯಿಯ ನಿಯತ್ತಿಗೆ ಶಹಬ್ಬಾಸ್ ಎಂದಿದ್ದಾರೆ. ಇಲ್ಲಿನ ಶಿವ  ಗಣೇಶ್ ಕಾಲೋನಿಯಲ್ಲಿ ಘಟನೆ ನಡೆದಿದೆ.  ಮನೆಯ ತೋಟಕ್ಕೆ ಹಾವು ನುಗ್ಗಿದ್ದು.  ಮನೆ ಮನೆಗೆಲಸದವರ ಮಕ್ಕಳು ಆಟವಾಡುತ್ತಿದ್ದರು. ಹಾವನ್ನು ನೋಡಿದ ಮಕ್ಕಳು ಕಿರುಚಿ ಸಹಾಯಕ್ಕಾಗಿ ಕೂಗಿದ್ದಾರೆ. ಈ ವೇಳೆ ತೋಟದ ಇನ್ನೊಂದು ತುದಿಯಲ್ಲಿ ಕಟ್ಟಿಹಾಕಲಾಗಿದ್ದ ಪಿಟ್ ಬುಲ್ ನಾಯಿ ತನ್ನನ್ನು ಕಟ್ಟಿ ಹಾಕಿದ್ದ ಸಂಕೊಲೆಯನ್ನು ಕಿತ್ತುಕೊಂಡು ಬಂದು ಮಕ್ಕಳನ್ನು ಕಾಪಾಡಿದೆ.
झांसी से एक वीडियो वायरल हुआ है, जहां पिटबुल और कोबरा की खतरनाक लड़ाई हो रही है।गार्डन में कुछ बच्चे खेल रहे थे.#पिटबुलकी नजर कोबरा पर पड़ी तो उसने अपने दांतों से रस्सी को काटा और कोबरा से भिड़ गया. पिटबुल ने कोबरा को अपने मुंह में दबाया और जमीन पर पटक-पटकर उसे मार डाला।../bNbPJnGQX8
ವೀಡಿಯೊದಲ್ಲಿ, ಪಿಟ್ ಬುಲ್ ನಾಯಿ ಬಾಯಿಯಲ್ಲಿ ಕಾಳಿಂಗ ಸರ್ಪವನ್ನು ಬಿಗಿಯಾಗಿ ಹಿಡಿದುಕೊಂಡು ಪದೇ ಪದೇ ನೆಲಕ್ಕೆ ಬಡಿದು ಕೊಂದಿದೆ. ನಾಯಿ ಹಾವಿನ ಜತೆಗಿನ ಹೋರಾಟವನ್ನು ಸುಮಾರು ಐದು ನಿಮಿಷಗಳ ಕಾಲ ಮುಂದುವರಿ ಸಿ ಕೊನೆಗೆ ಅದನ್ನು ಕೊಂದಿದೆ. ನಾಯಿಯ ಮಾಲೀಕ ಪಂಜಾಬ್ ಸಿಂಗ್ ಪ್ರಕಾರ, ಹಾವು ಕೊಂದು ಜೀವ ಉಳಿಸಿರುವುದು ಇದೇ ಮೊದಲಲ್ಲ. ಇಲ್ಲಿಯವರೆಗೆ, ಜೆನ್ನಿ ಸುಮಾರು ಎಂಟರಿಂದ ಹತ್ತು ಹಾವುಗಳನ್ನು ಕೊಂದು ಮನುಷ್ಯರನ್ನು ಕಾಪಾಡಿದೆ.
ಘಟನೆ ನಡೆದ ದಿನ,  ಸಿಂಗ್ ಅವರು ಮನೆಯಲ್ಲಿ ಇರಲಿಲ್ಲ. ಜೆನ್ನಿಯ ಧೈರ್ಯದ ಬಗ್ಗೆ ಮಾತನಾಡಿದ ಅವರು ಹಾವು ಮನೆಗೆ ಪ್ರವೇಶಿಸಿದ್ದರೆ, ದುರ್ಘಟನೆ ಸಂಭವಿಸುತ್ತಿತ್ತು ಎಂದು ಹೇಳಿದ್ದಾರೆ.
ನಾನು ನಿನ್ನೆ ಮನೆಯಲ್ಲಿ ಇರಲಿಲ್ಲ, ಆದರೆ ನನ್ನ  ಮಕ್ಕಳು ಇದ್ದರು. ಇದು ನಾವು ನೋಡಿದ ಮೊದಲ ಹಾವು ಅಲ್ಲ,  ನಮ್ಮ ಮನೆ ಹೊಲಗಳ ಬಳಿ ಇದೆ. ಮತ್ತು ಮಳೆಗಾಲದಲ್ಲಿ ಹಲವಾರು ಹಾವುಗಳು ಬರುತ್ತವೆ.  ನಾಯಿ ಸುಮಾರು 8 ರಿಂದ 10 ಹಾವುಗಳನ್ನು ಕೊಂದಿದೆ ಎಂದು ಅವರು ಹೇಳಿದ್ದಾರೆ.
ಮನೆಯ ಸಹಾಯಕಿಯ ಮಕ್ಕಳು ಆಟವಾಡುತ್ತಿದ್ದಾಗ ಕಪ್ಪು ಹಾವು ಕಾಣಿಸಿಕೊಂಡಿದೆ. ಮಕ್ಕಳು ಕಿರುಚಿದ್ದಾರೆ. ಆಗ ಹಾವು ಗಾಬರಿಗೊಂಡಿತ್ತು. ನಮ್ಮ ಪಿಟ್ ಬುಲ್ ಅದನ್ನು ಗಮನಿಸಿ, ಅದರ ಹಗ್ಗ ಬಿಡಿಸಿಕೊಂಡು ಬಂದು ಹಾವಿನ ಮೇಲೆ ದಾಳಿ ಮಾಡಿದೆ ಎಂದು  ಹೇಳಿದರು.
ಇದನ್ನೂ ಓದಿ: : ಇಲ್ಲಿ ಮದುವೆಯಾದ ವಧು ಒಂದು ವಾರದವರೆಗೆ ನಗ್ನವಾಗಿರಬೇಕು!
ಸಿಂಗ್ ಅವರು ತಮ್ಮ ನಾಯಿಯ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ್ದಾರೆ. ಪ್ರತಿಯೊಬ್ಬರೂ ಪ್ರಾಣಿಗಳಿಗೆ ಹೆಚ್ಚಿನ ಪ್ರೀತಿಯನ್ನು ತೋರಿಸಬೇಕು ಎಂದು ಸಿಂಗ್ ಹೇಳಿದ್ದಾರೆ. ನಾವು ಪ್ರಾಣಿಗಳಿಗೆ ಪ್ರೀತಿ ತೋರಿಸಬೇಕು. ಯಾಕೆಂದರೆ ನಾಯಿ ಮತ್ತು ಹಾವಿನ ನಡುವಿನ ಹೋರಾಟ ಸುಮಾರು ಐದು ನಿಮಿಷಗಳ ಕಾಲ ನಡೆದಿತ್ತು. ಶ್ವಾನ ಹಾವನ್ನು ಕೊಲ್ಲದಿದ್ದರೆ, ದುರಂತ ಸಂಭವಿಸುತ್ತಿತ್ತು ಎಂದು ಹೇಳಿದ್ದಾರೆ.