 : ಎರಡು ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿಯಾಗಿ ಮೂವರ ದುರ್ಮರಣ
ಬಾಗಲಕೋಟೆ:ಎರಡು ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಯುವತಿಯರು ಹಾಗೂ ಒಬ್ಬ ಯುವಕ ದುರ್ಮರಣ ( ) ಹೊಂದಿರುವುದು ನಗರದ ಹೆಲಿಪ್ಯಾಡ್ ರಸ್ತೆಯಲ್ಲಿ ನಡೆದಿದೆ. ಗಣೇಶ ಹಬ್ಬಕ್ಕೆಂದು ಊರಿಗೆ ಬಂದಿದ್ದ ಯುವತಿ, ದೂರದ ಸಂಬಂಧಿ ಜತೆ ನಗರಕ್ಕೆ ಬಂದಿದ್ದ ವೇಳೆ ದುರಂತ ಸಂಭವಿಸಿದೆ.
ಬೆಂಗಳೂರಿನ ಸಾಪ್ಟವೇರ್ ಎಂಜಿನಿಯರ್ ರಜನಿ ಒಂದಕುದರಿ (34), ಬಾಗಲಕೋಟೆಯ ಬಿವಿವಿ ಸಂಘದ ದಂತ ವೈದ್ಯಕೀಯ ಕಾಲೇಜಿನ ಉಪನ್ಯಾಸಕಿ ಶೃತಿ ಒಂದಕುದರಿ (32) ಹಾಗೂ ಅಭಿಷೇಕ ದೋತ್ರೆ (20) ಮೃತರು. ಬೈಕ್‌ನಲ್ಲಿದ್ದ ಇನ್ನೊಬ್ಬ ಯುವಕನಿಗೆ ಗಂಭೀರ ಗಾಯಗಳಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಬ್ಬರು ಯುವತಿಯರು ಸ್ಕೂಟಿಯಲ್ಲಿ ಹೋಗುತ್ತಿದ್ದಾಗ, ಹೆಲಿಪ್ಯಾಡ್ ರಸ್ತೆಯ ಬಳಿ ರಸ್ತೆಯ ತಿರುವು ತೆಗೆದುಕೊಂಡು ಹೋಗುತ್ತಿದ್ದಾಗ, ವೇಗವಾಗಿ ಬಂದ ಬೈಕ್‌ಗೆ ಮುಖಾಮುಖಿ ಡಿಕ್ಕಿಯಾಗಿದೆ. ಈ ವೇಳೆ ಗಂಭೀರವಾಗಿ ಗಾಯಗೊಂಡ ಒಬ್ಬ ಯುವತಿ ಸ್ಥಳದಲ್ಲೇ ಮೃತಪಟ್ಟರೆ, ಮತ್ತೊಬ್ಬ ಯುವತಿ ಹಾಗೂ ಯುವಕ ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಮೃತಪಟ್ಟಿದ್ದಾರೆ.
ಇದನ್ನೂ ಓದಿ | : ಶೂಟಿಂಗ್‌ ವೇಳೆ ಲೈಟ್‌ಮ್ಯಾನ್‌ ಸಾವು, ಯೋಗರಾಜ್‌ ಭಟ್‌ ಮೇಲೆ ಕೇಸು
ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿರುವ ರಜನಿ, ರಜೆಗೆಂದು ಬಾಗಲಕೋಟೆಗೆ ಬಂದಿದ್ದರು. ತನ್ನ ದೂರದ ಸಂಬಂಧಿ ಶೃತಿ ಜತೆಗೆ ಹೊರಗಡೆ ಹೋಗಿ, ಮನೆಗೆ ಮರಳಿದ್ದಾಗ ದುರ್ಘಟನೆ ಸಂಭವಿಸಿದೆ. ಬಾಗಲಕೋಟೆ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈರೋಡ್: ಲಿವ್-ಇನ್ ಸಂಗಾತಿಯ (- ) ಮೇಲೆ ಹಲ್ಲೆ ( ) ಮಾಡಿ, ಆತ್ಮಹತ್ಯೆ ( ) ಮಾಡಿಕೊಳ್ಳುವ ಉದ್ದೇಶದಿಂದ ಮನೆಗೇ ಬೆಂಕಿ ಹಚ್ಚಿಕೊಂಡಿದ್ದ ಕರ್ನಾಟಕದ ಐಪಿಎಸ್‌ ಅಧಿಕಾರಿಯನ್ನು ( ) ತಮಿಳುನಾಡಿನಲ್ಲಿ ಆರೆಸ್ಟ್‌ ಮಾಡಲಾಗಿದೆ. ಇವರು ಕರ್ನಾಟಕದ ಕಲಬುರಗಿಯಲ್ಲಿ ಸೇವೆಯಲ್ಲಿದ್ದಾಗ ಹೆಂಡತಿ ಮಕ್ಕಳನ್ನು ತೊರೆದು ಅಲ್ಲಿನ ವಿವಾಹಿತೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಜೊತೆಗೆ ಪ್ರಣಯ ಆರಂಭಿಸಿ, ಟ್ರಾನ್ಸ್‌ಫರ್‌ ಹಾಗೂ ಅಮಾನತಿಗೆ ಒಳಗಾಗಿದ್ದರು.
ಕರ್ನಾಟಕ ಕೇಡರ್ ( ) ಐಪಿಎಸ್ ಅಧಿಕಾರಿ ಎಂ. ಅರುಣ್ ರಂಗರಾಜನ್ (38) ಬಂಧಿತರು.  ತಮಿಳುನಾಡಿನ ಈರೋಡ್‌ ಬಳಿಯ ಗೋಬಿಚೆಟ್ಟಿಪಾಳ್ಯಂನಲ್ಲಿ ತಮ್ಮ ಮನೆಗೆ ಅವರು ಬೆಂಕಿ ಹಚ್ಚಿದ್ದರು. ಅಧಿಕಾರಿಯ ಮನೆಗೆ ನುಗ್ಗಿದ ಪೊಲೀಸರು ಬುಧವಾರ ಸಂಜೆ ಅವರನ್ನು ಬಂಧಿಸಿದ್ದಾರೆ. ಮಾಜಿ ಸಬ್ ಇನ್ಸ್‌ಪೆಕ್ಟರ್ ಕೂಡ ಆಗಿರುವ ಅಧಿಕಾರಿಯ ಲಿವ್-ಇನ್ ಸಂಗಾತಿಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿಸಲಾಗಿದೆ.
ಸೇವೆಯಿಂದ ಅಮಾನತುಗೊಂಡಿರುವ ರಂಗರಾಜನ್, ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದ ಮನೆಗೆ ಬೆಂಕಿ ಹಚ್ಚಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಅವರು ಮತ್ತು ಅವರ ಸಂಗಾತಿ ಸುಜಾತಾ (38) ಕಳೆದ ಫೆಬ್ರವರಿಯಿಂದ ದೂರವಾಗಿದ್ದರು. ಇದಕ್ಕೂ ಮುನ್ನ ತಮಿಳುನಾಡಿನ ದೇವಸ್ಥಾನಗಳನ್ನು ಸುತ್ತುತ್ತಿದ್ದಾಗ ಸುಜಾತಾ ಮೇಲೆ ರಂಗರಾಜನ್‌ ಹಲ್ಲೆ ನಡೆಸಿದ್ದರು. ಈ ಬಗ್ಗೆ ದೂರು ದಾಖಲಾಗದಿದ್ದರೂ ಪೊಲೀಸರು ಮಧ್ಯಪ್ರವೇಶಿಸಿ ವಿಷಯ ಬಗೆಹರಿಸಿದ್ದರು. ದಂಪತಿಗಳು ಗೋಬಿಚೆಟ್ಟಿಪಾಳ್ಯಂನಲ್ಲಿರುವ ರಂಗರಾಜನ್ ಅವರ ಪೋಷಕರ ಮನೆಗೆ ಹಿಂದಿರುಗಿದಾಗ, ಆತ ಮತ್ತೆ ಸುಜಾತಾ ಮೇಲೆ ಹಲ್ಲೆ ನಡೆಸಿದ್ದರು. ಆಕೆ ಆಸ್ಪತ್ರೆಗೆ ದಾಖಲಾಗಿದ್ದರು.
ಪೊಲೀಸರು ರಂಗರಾಜನ್‌ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಸ್ಥಳೀಯ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಕರ್ನಾಟಕ ಸರ್ಕಾರ ಆತನನ್ನು ಸೇವೆಯಿಂದ ಅಮಾನತುಗೊಳಿಸಿದೆ. ಅಂದಿನಿಂದ ರಂಗರಾಜನ್ ತನ್ನ ಪೋಷಕರೊಂದಿಗೆ ವಾಸಿಸುತ್ತಿದ್ದರು. ಭಾನುವಾರ ಸುಜಾತಾ ಆತನ ಮನೆಗೆ ಮರಳಿದ್ದು, ಅಲ್ಲಿ ಅವರು ಮತ್ತೆ ಜಗಳ ಆರಂಭಿಸಿದ್ದರು. ಬುಧವಾರ ಅವರ ಕಲಹ ತೀವ್ರಗೊಂಡಿತ್ತು.
ಸುಜಾತಾ ಮೇಲೆ ರಂಗರಾಜನ್‌ ಕಬ್ಬಿಣದ ರಾಡ್‌ನಿಂದ ಹಲ್ಲೆಗೆ ಯತ್ನಿಸಿದ್ದಾರೆ ಎಂದು ಗೋಬಿಚೆಟ್ಟಿಪಾಳ್ಯಂ ಪೊಲೀಸ್ ಇನ್ಸ್‌ಪೆಕ್ಟರ್ ಪಿ.ಕಾಮರಾಜ್ ತಿಳಿಸಿದ್ದಾರೆ. ಸುಜಾತಾ ಅವರ ದಾಳಿಯನ್ನು ತಪ್ಪಿಸಿ ಪೊಲೀಸರಿಗೆ ಮಾಹಿತಿ ನೀಡಿದರು. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದಾಗ ರಂಗರಾಜನ್ ಮನೆಗೆ ಬೀಗ ಹಾಕಿಕೊಂಡು ಬೆಂಕಿ ಹಚ್ಚಿ ಕೊಂಡಿರುವುದು ಕಂಡು ಬಂದಿದೆ. ಪೊಲೀಸರು ಬೆಂಕಿ ನಂದಿಸಿ ಮನೆಗೆ ನುಗ್ಗಿದ್ದಾರೆ.
ಕೋಪದ ಭರದಲ್ಲಿ ಅರುಣ್, ಇನ್ಸ್‌ಪೆಕ್ಟರ್ ಕಾಮರಾಜ್ ಮೇಲೆ ಹಲ್ಲೆ ಮಾಡಲು ಪ್ರಯತ್ನಿಸಿದ. ಆದರೆ ಆತನನ್ನು ಬಂಧಿಸಲಾಯಿತು. ನ್ಯಾಯಾಂಗ ಬಂಧನದ ಅಡಿಯಲ್ಲಿ ಆತನನ್ನು ಕೊಯಮತ್ತೂರು ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿದೆ.
ಮಾಥೇಶ್ವರನ್ ಎಂಬ ನಿವೃತ್ತ ಸ್ಯಾನಿಟರಿ ಇನ್ಸ್ ಪೆಕ್ಟರ್ ಪುತ್ರ ರಂಗರಾಜನ್ 2012ರಲ್ಲಿ ಛತ್ತೀಸ್‌ಗಢ ಕೇಡರ್‌ನ ಐಪಿಎಸ್ ಅಧಿಕಾರಿ. ಅವರು ಛತ್ತೀಸ್‌ಗಢದ ಇನ್ನೊಬ್ಬ ಐಪಿಎಸ್ ಅಧಿಕಾರಿ ಎಲಕ್ಕಿಯಾ ಅವರನ್ನು ವಿವಾಹ ವಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಇಬ್ಬರೂ ನಂತರ ಕರ್ನಾಟಕಕ್ಕೆ ವರ್ಗಾವಣೆಗೊಂಡರು. ಇಲ್ಲಿ ಅವರನ್ನು ಕಲಬುರಗಿ ಜಿಲ್ಲೆಗೆ ಪೊಲೀಸ್ ವರಿಷ್ಠಾಧಿಕಾರಿಯಾಗಿ (ಆಂತರಿಕ ಭದ್ರತೆ) ನೇಮಿಸಲಾಯಿತು.
ಈ ಸುದ್ದಿ ಓದಿ: : ದರ್ಶನ್‌ ಗ್ಯಾಂಗ್‌ ಮುಂದೆ ಅಂಗಲಾಚುತ್ತಿರುವ ರೇಣುಕಾಸ್ವಾಮಿ ಕೊನೆ ಕ್ಷಣದ ಫೋಟೋ ವೈರಲ್‌
ಕಲಬುರಗಿಯಲ್ಲಿ ಅರುಣ್ ಅದೇ ಜಿಲ್ಲೆಯ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಸುಜಾತಾ ಅವರೊಂದಿಗೆ ವಿವಾಹೇತರ ಸಂಬಂಧ‌ ಪ್ರಾರಂಭಿಸಿದರು. ಸುಜಾತಾ ಅವರ ಪತಿ ಕಂದಪ್ಪ ಕೂಡ ಪೊಲೀಸ್ ಇನ್ಸ್‌ಪೆಕ್ಟರ್ ಆಗಿದ್ದು, ಈ ಸಂಬಂಧ ಮೇಲಧಿಕಾರಿಗಳಿಗೆ ದೂರು ನೀಡಿದ್ದರು. ನಂತರ ಅರುಣ್ ಅವರನ್ನು ಕಾರವಾರ ಜಿಲ್ಲೆಗೆ ವರ್ಗಾಯಿಸಲಾಗಿತ್ತು. ತದನಂತರ ಏಲಕ್ಕಿಯಾ ಅವರು ರಂಗರಾಜನ್‌ಗೆ ವಿಚ್ಛೇದನ ನೀಡಿದ್ದರು. ಸುಜಾತಾ, ಕಂದಪ್ಪನೊಂದಿಗಿನ ತನ್ನ ಮದುವೆಯನ್ನು ಕೊನೆಗೊಳಿಸಿ ರಂಗರಾಜನ್‌ ಜೊತೆ ಲಿವ್‌ ಇನ್‌ ಸಂಬಂಧದಲ್ಲಿ ವಾಸಿಸಲು ಪ್ರಾರಂಭಿಸಿದ್ದರು.