 : ಎಲ್ಲಾ ನ್ಯಾಯಾಲಯಗಳಿಗಿಂತ ಮೇಲೆ ಅತ್ಯುನ್ನತವಾದ ಆತ್ಮಸಾಕ್ಷಿಯ ನ್ಯಾಯಾಲಯವಿದೆ: ಸಿಎಂ
ಬೆಂಗಳೂರು:ಈಗಿನ ನ್ಯಾಯಾಲಯಗಳಲ್ಲಿ ನ್ಯಾಯ ಸಿಗದೇ ಹೋಗಬಹುದು. ಆದರೆ ನಾವು ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಳ್ಳಬೇಕು. “ಎಲ್ಲಾ ನ್ಯಾಯಾಲಯಗಳಿಗಿಂತ ಮೇಲೆ ಅತ್ಯುನ್ನತವಾದ ಆತ್ಮಸಾಕ್ಷಿಯ ನ್ಯಾಯಾಲಯವಿದೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಾತ್ಮ ಗಾಂಧಿ ( ) ಅವರ ಮಾತನ್ನು ಪುನರುಚ್ಚರಿಸಿದರು.
ಕರ್ನಾಟಕ ಗಾಂಧೀ ಸ್ಮಾರಕ ನಿಧಿಯಿಂದ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು. ಯಾರಾದರೂ ಹೊಗಳಲಿ, ತೆಗಳಲಿ. ಟೀಕೆ ಮಾಡಲಿ, ಬಿಡಲಿ. ಉಳಿದವರು ಗುರುತಿಸಲಿ ಬಿಡಲಿ ನಾವು ಪ್ರತಿಯೊಬ್ಬರೂ ಆತ್ಮಸಾಕ್ಷಿಯ ನ್ಯಾಯಾಲಯದಲ್ಲಿ ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಳ್ಳಬೇಕು ಎಂದರು.
ಕೇವಲ ಭಾಷಣದಿಂದ ಮಹಾತ್ಮಗಾಂಧಿ ಮತ್ತು ಅಂಬೇಡ್ಕರ್ ಅವರ ಆಶಯಗಳು ಈಡೇರುವುದಿಲ. ಇವರಿಬ್ಬರ ಬದುಕಿನ ಮೌಲ್ಯ ಮತ್ತು ಸಂದೇಶಗಳನ್ನು ಜನ ಮಾನಸದಲ್ಲಿ ವಿಸ್ತರಿಸುತ್ತಲೇ ಸರ್ಕಾರ ಸಮ ಸಮಾಜ ನಿರ್ಮಿಸಲು ಪೂರಕವಾದ ಕಾರ್ಯಕ್ರಮಗಳನ್ನು ರೂಪಿಸಬೇಕಾಗುತ್ತದೆ. ನಾನು ಮತ್ತು ನಮ್ಮ ಸರ್ಕಾರ ಈ ದಿಕ್ಕಿನಲ್ಲಿ ಸಾಗುತ್ತಿದ್ದೇವೆ ಎಂದರು.
ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಅತ್ಯಂತ ಪ್ರಾಮಾಣಿಕ ನಾಯಕರು ಮತ್ತು ರಾಜಕಾರಣಿ. ಇವರೆಲ್ಲರ ಬದುಕಿನ ಸಂದೇಶಗಳು ನಮಗೆ ಮಾರ್ಗದರ್ಶನವಾದರೆ, ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆದರೆ ನಾವು ಈ ಮಹಾತ್ಮರಿಗೆ ಸಲ್ಲಿಸುವ ಗೌರವ ಎಂದರು‌.
ಗಾಂಧೀಜಿ ಅವರ ಹೋರಾಟದಿಂದಾಗಿ ನಾವು ಸ್ವಾತಂತ್ರ್ಯದ ಗಾಳಿ ಸೇವಿಸುತ್ತಿದ್ದೇವೆ. ಗಾಂಧಿ ಇಡೀ ಜಗತ್ತಿನ ನಾಯಕರು ಎನ್ನುವ ಗೌರವ ಸಿಕ್ಕಿರುವ ಭಾರತೀಯರಿಗೆ ಸಿಕ್ಕ ಹೆಗ್ಗಳಿಕೆ ಎಂದರು.
ಇದನ್ನೂ ಓದಿ |    : ಮಹಾತ್ಮ ಗಾಂಧೀಜಿ ಮತ್ತು ಗಾಂಧಿವಾದದ ಅವಲೋಕನ
ಕಾನೂನು ಸಚಿವರಾದ ಎಚ್.ಕೆ.ಪಾಟೀಲ್, ಗಾಂಧಿ ಭವನ‌ ಕಾರ್ಯದರ್ಶಿ ವಿಶುಕುಮಾರ್, “ಎಲ್ಲರ ಗಾಂಧಿ” ಕೃತಿಯ ಲೇಖಕರಾದ ನಟರಾಜ್ ಹುಳಿಯಾರ್ ಸೇರಿ‌ ಹಲವು ಸಾಧಕರು ಉಪಸ್ಥಿತರಿದ್ದರು.
ಬೆಂಗಳೂರು: ಕಿತ್ತೂರು ಉತ್ಸವಕ್ಕೆ (  2024) ಚಾಲನೆ ನೀಡುವ ವೇಳೆ ಸಿಎಂ ಸಿದ್ದರಾಮಯ್ಯ ( ) ಅವರ ಜುಬ್ಬಾದ ಕೈಗೆ ಸಣ್ಣ ಪ್ರಮಾಣದಲ್ಲಿ ಬೆಂಕಿಯ ಕಿಡಿ ತಾಗಿದೆ. ಜಾಗೃತರಾಗಿದ್ದ ಸಿಎಂ ಭದ್ರತಾ ಸಿಬ್ಬಂದಿ ಕೂಡಲೇ ಅದನ್ನು ಆರಿಸಿದ್ದು, ಅವಘಡ ತಪ್ಪಿದೆ.
ಬುಧವಾರ ವಿಧಾನಸಭೆ ಆವರಣದಲ್ಲಿ ನಡೆದ ಕಿತ್ತೂರು ಉತ್ಸವಕ್ಕೆ ಚಾಲನೆ ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಈ ಘಟನೆ ನಡೆಯಿತು. ಸಿಎಂ ಸಿದ್ದರಾಮಯ್ಯ ಅವರು ಜ್ಯೋತಿಗೆ ಚಾಲನೆ ನೀಡುವಾಗ ಸಣ್ಣ ಪ್ರಮಾಣದಲ್ಲಿ ದೀಪದ ಕಿಡಿ ಜುಬ್ಬಾಗೆ ತಗುಲಿದ್ದು, ಇದನ್ನು ಗಮನಿಸಿದ ಭದ್ರತಾ ಸಿಬ್ಬಂದಿಗಳು ತಕ್ಷಣವೇ ಎಚ್ಚೆತ್ತುಕೊಂಡು ಬೆಂಕಿಯನ್ನು ಆರಿಸಿದರು.
ಈ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಕಿತ್ತೂರು ರಾಣಿ ಚೆನ್ನಮ್ಮ ಸ್ವಾಭಿಮಾನದ ಸಂಕೇತ. ಬ್ರಿಟಿಷರು ವಿಧಿಸಿದ ತೆರಿಗೆಯನ್ನು ವಿರೋಧಿಸಿದ್ದರು. ದತ್ತು ಮಕ್ಕಳಿಗೆ ಹಕ್ಕಿಲ್ಲ ಎಂಬುದನ್ನು ವಿರೋಧಿಸಿದರು. ತೆರಿಗೆ ಕೊಡುವುದಿಲ್ಲ ಎಂದು ನೇರವಾಗಿ ಬ್ರಿಟಿಷರಿಗೆ ಹೇಳಿದ ದಿಟ್ಟ ಮಹಿಳೆ ಈಕೆ. ಸಂಗೊಳ್ಳಿ ರಾಯಣ್ಣ ಕೂಡ ಇವರ ಸೈನ್ಯದಲ್ಲಿದ್ದವರು. ಮೊದಲ ಯುದ್ಧದಲ್ಲಿ ಕಿತ್ತೂರು ರಾಣಿ ಬ್ರಿಟಿಷರ ವಿರುದ್ಧ ಜಯ ಗಳಿಸಿದರು. ಎರಡನೇ ಯುದ್ಧದಲ್ಲಿ ಬ್ರಿಟಿಷರು ಮೋಸದಿಂದ ಗೆದ್ದು ಕಿತ್ತೂರನ್ನು ವಶಪಡಿಸಿಕೊಂಡರು ಎಂದರು.
ನಾವು ಕಿತ್ತೂರು ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣನವರಿಂದ ದೇಶಪ್ರೇಮ, ಸ್ವಾಭಿಮಾನ ಕಲಿಯಬೇಕು. ನಮ್ಮ ದೇಶದ ಎಲ್ಲ ರಾಣಿಯರ ಸಾಲಿನಲ್ಲಿ ಚೆನ್ನಮ್ಮ ಮೊದಲ ಸಾಲಿನಲ್ಲಿ ಇರುತ್ತಾರೆ. ರಾಜ್ಯ ಸರ್ಕಾರ ಕಿತ್ತೂರಿನ ಅಭಿವೃದ್ಧಿಗೆ ಎಲ್ಲ ರೀತಿ ಸಹಕಾರ ಕೊಡುತ್ತಿದೆ ಎಂದು ಹೇಳಿದರು.
ಇದನ್ನೂ ಓದಿ: : ಸಿಎಂ ಪತ್ನಿಯ 14 ನಿವೇಶನಗಳ ಖಾತೆ ರದ್ದು; ವಶಕ್ಕೆ ಪಡೆದ ಮುಡಾ
ಬೆಳಗಾವಿಯಲ್ಲಿ 100 ವರ್ಷದ ಸಂಭ್ರಮಾಚರಣೆ ಆರಂಭವಾಗುತ್ತಿದೆ. ಹೆಚ್.ಡಿ.ಪಾಟೀಲ್ ಅಧ್ಯಕ್ಷತೆಯಲ್ಲಿ ಸಮಿತಿ ಮಾಡಲಾಗಿದೆ. ಶಾಂತಿಯುತವಾಗಿ ಸತ್ಯಾಗ್ರಹದಿಂದ ಬ್ರಿಟಿಷರನ್ನ ದೇಶದಿಂದ ತೊಲಗಿಸಿ ಸ್ವತಂತ್ರ ತಂದು ಕೊಡಲಾಯಿತು. ಇದರ ಮುಂಚೂಣಿಯಲ್ಲಿ ನಾಯಕತ್ವವನ್ನು ಗಾಂಧಿ ವಹಿಸಿಕೊಂಡಿದ್ದರು. ಗಾಂಧೀಜಿ ಬಂದ ನಂತರ ಈ ದೇಶದಲ್ಲಿ ಬಂದೂಕು ಕೈಬಿಟ್ಟು ಶಾಂತಿಯುತ ಹೋರಾಟದ ಮೂಲಕ ರಕ್ತಪಾತವಿಲ್ಲದೆ ಸ್ವಾತಂತ್ರ್ಯ ಗಳಿಸಲಾಯಿತು. ಅಂಥ ಗಾಂಧೀಜಿಯವರಿಗೆ ನಮನ ಸಲ್ಲಿಸುವ ಕೆಲಸ ಮಾಡುತ್ತಿದ್ದೇವೆ ಎಂದು ಸಿಎಂ ಹೇಳಿದ್ದಾರೆ.