ಬನಶಂಕರಿ ದೇವಸ್ಥಾನಕ್ಕೆ 107 ವರ್ಷಗಳ ನಂತರ ಹೊಸ ರಥ ಆಗಮನ
ಧಾರ್ಮಿಕ ದತ್ತಿ (ಮುಜರಾಯಿ) ಇಲಾಖೆಯ ಅಧಿಕಾರಿಗಳು ಟೈಮ್ಸ್ ಆಫ್ ಇಂಡಿಯಾಕ್ಕೆ ಗುರುವಾರ ಮಹಾರಥೋತ್ಸವದ ಸಮಯದಲ್ಲಿ ರಥವು ದೇವಾಲಯದ ಸುತ್ತಲೂ ದೇವರನ್ನು ಕೊಂಡೊಯ್ಯುತ್ತದೆ ಎಂದು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಸುಮಾರು 50 ಸಾವಿರಕ್ಕೂ ಹೆಚ್ಚು ಭಕ್ತರು ಪಾಲ್ಗೊಳ್ಳುವ ನಿರೀಕ್ಷೆಯಿದೆ.
ಉಡುಪಿ ಜಿಲ್ಲೆಯ ಕುಂದಾಪುರದ ಕುಂಭಾಶಿಯಲ್ಲಿರುವ ಶ್ರೀ ವಿಶ್ವಕರ್ಮ ಕರಕುಶಲ ಮತ್ತು ಶಿಲ್ಪಕಲಾ ಕೇಂದ್ರದಲ್ಲಿ ರಥವನ್ನು ಕೆತ್ತಲಾಗಿದೆ. ಅಯೋಧ್ಯೆಯ ಶ್ರೀರಾಮ ದೇಗುಲಕ್ಕೆ ರಥ ಕೆತ್ತಿರುವ ಶಿಲ್ಪಿ ಲಕ್ಷ್ಮೀನಾರಾಯಣ ಆಚಾರ್ಯ ದಾಖಲೆ ಸಮಯದಲ್ಲಿ ಈ ರಥವನ್ನು ಕೆತ್ತಿದ್ದಾರೆ ಎಂದು ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮಿ ತಿಳಿಸಿದರು.
ಬೆಂಗಳೂರಿನಲ್ಲಿರುವ ಕೆಲವೇ ಕೆಲವು ‘ಎ’ ದರ್ಜೆಯ ದೇವಾಲಯಗಳಲ್ಲಿ ಇದು ಒಂದಾಗಿದೆ.
