ಬಿಜೆಪಿ ಕಾರ್ಯಕರ್ತ ಪ್ರವೀಣ್‌ ಅಂತಿಮ ಯಾತ್ರೆ ಬಳಿಕ ಪರಿಸ್ಥಿತಿ ಉದ್ವಿಗ್ನ
ಪುತ್ತೂರು/ಸುಳ್ಯ/ದಕ್ಷಿಣ ಕನ್ನಡ :ಬಿಜೆಪಿ ಕಾರ್ಯಕರ್ತ ಪ್ರವೀಣ್‌ ಹತ್ಯೆ ಪ್ರಕರಣ ಸಂಬಂಧಿಸಿ ಅಂತಿಮ ಯಾತ್ರೆ ಬಳಿಕಬಿಗುವಿನ ವಾತಾವರಣ ನಿರ್ಮಾಣಗೊಂಡಿತು.
ಪಕ್ಷಕ್ಕಾಗಿ ದುಡಿದ ಕಾರ್ಯಕರ್ತನನ್ನು ನೋಡಲು ಕನಿಷ್ಟ ಪಕ್ಷ ಆಸ್ಪತ್ರೆಗೆ ಬಂದಿಲ್ಲ. ಪಾರ್ಥಿವ ಶರೀರ ವನ್ನೂ ನೋಡಲು ಬರುವಾಗಲು ಮಧ್ಯಾಹ್ನ ವಾಗಿದೆ. ಆ ಕಾರಣಕ್ಕಾಗಿ ಕಾರ್ಯಕರ್ತರು ಕಿಚ್ಚು ಹಚ್ಚಿದ್ದಾರೆ.
ಈ ವೇಳೆ ಸ್ಥಳಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಸಚಿವ ನಳೀನ್‌ ಕುಮಾರ್‌ ಕಟೀಲ್‌ ಆಗಮಿಸುತ್ತಿದ್ದಂತೆ ಕಾರ್ಯಕರ್ತರು ಕಾರಿಗೆ ಮುತ್ತಿಗೆ ಹಾಕಿ ಜಗ್ಗಾಡಿದ್ದಾರೆ. ಪೊಲೀಸ್‌ ಬಂದೋಬಸ್ತಿನಲ್ಲಿ ಕಟೀಲು ಪಾರಾಗಿದ್ದಾರೆ. ಘಟನಾ ಸ್ಥಳದಲ್ಲಿ ಪೊಲೀಸರು ಲಾಠಿ ಚಾರ್ಜ್‌ ಮಾಡಿದ್ದಾರೆ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
://./-2/
ಹಿಂದೂ ಕಾರ್ಯಕರ್ತರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ಪರಿಣಾಮ, ಲಾಠಿಚಾರ್ಜ್ ಕೂಡ ನಡೆಸಲಾಗಿದೆ. ಈವೇಳೆ ಹಿಂದೂ ಕಾರ್ಯಕರ್ತನೋರ್ವ ಗಾಯಗೊಂಡಿದ್ದಾನೆ. ಆತನನ್ನು ಸ್ಥಳೀಯರು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ.
ಸಂಘ ಪರಿವಾರದ ಸಂಘಟನೆಗಳ ಕಾರ್ಯಕರ್ತರು ಟಯರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲವು ಕಡೆ ಇದನ್ನು ತಡೆಯಲು ಯತ್ನಿಸಿದ ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಸಿದ್ದಾರೆ.
ಸಂಘಪರಿವಾರದ ಸಂಘಟನೆಗಳ ಪ್ರಮುಖರು ಅಂಗಡಿಗಳ ಮುಂಗಟ್ಟು ಬಂದ್ ಮಾಡಲು ಕರೆ ನೀಡುತ್ತಿದ್ದಾರೆ. ಸುಮಾರು 50ಕ್ಕೂ ಕಾರ್ಯಕರ್ತರು ಸುಳ್ಯ ಮುಖ್ಯ ರಸ್ತೆಯಲ್ಲಿ ಚಲಿಸುತ್ತಾ ಅಂಗಡಿ ಬಂದ್ ಮಾಡಲು ಸೂಚನೆ ನೀಡಿದರು. ಸುಳ್ಯ ಹಳೆ ಗೇಟಿನಿಂದ ರಥ ಬೀದಿವರೆಗೆ ಎಲ್ಲಾ ಅಂಗಡಿಗಳು ಮುಚ್ಚಿವೆ.
ಖಾಸಗಿ ಬಸ್ಸು ನಿಲ್ದಾಣದಲ್ಲಿ ಬಸ್ಸುಗಳು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು, ಆಟೋ ಚಾಲಕರು ಸ್ವಯಂ ಪ್ರೇರಿತವಾಗಿ ಬಂದ್ ಮಾಡಿದ್ದಾರೆ. ಔಷಧ ಅಂಗಡಿಗಳು, ಹಾಲಿನ ಅಂಗಡಿಗಳು ಎಂದಿನಂತೆ ಕಾರ್ಯಚರಿಸುತ್ತಿದೆ. ಶಾಲೆ ಕಾಲೇಜುಗಳಿಗೆ ದಿಢೀರ್ ರಜೆ ಘೋಷಿಸಿದ್ದರಿಂದ ವಿದ್ಯಾರ್ಥಿಗಳು ಮನೆಗೆ ತೆರಳುತ್ತಿದ್ದಾರೆ.
