ಪೊಲೀಸ್ ಇನ್ಸ್‌ಪೆಕ್ಟರ್ ಗೆ ಏಕವಚನದಲ್ಲಿ ಅವಾಜ್ ಹಾಕಿದ ಮೂಡಿಗೆರೆ ಶಾಸಕ
ಚಿಕ್ಕಮಗಳೂರು: ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ, ಮಲ್ಲಂದೂರು ಪೊಲೀಸ್ ಠಾಣೆಗೆ ಹೊಸದಾಗಿ ಚಾರ್ಜ್ ತೆಗೆದುಕೊಂಡ ಪೊಲೀಸ್ ಇನ್ಸ್‌ಪೆಕ್ಟರ್ ಗೆ ಏಕವಚನದಲ್ಲಿ ಅವಾಜ್ ಹಾಕಿ ಬಾಯಿಗೆ ಬಂದಂತೆ ನಿಂದಿಸಿ ದ್ದಾರೆ.
ಇದೆ ವೇಳೆ ಶಾಸಕ ಕುಮಾರಸ್ವಾಮಿ ಐಜಿ ಅವರನ್ನು ನಿಂದಿಸಿದ್ದಾರೆ. ಈ ಸಂಬಂಧ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮಲ್ಲಂದೂರು ಠಾಣಾಧಿಕಾರಿಗೆ ಆವಾಜ್ ಹಾಕಿದ್ದು ನಿಜ, ಹೊಸದಾಗಿ ಠಾಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಳ್ಳುವ ವೇಳೆ ಸೌಜನ್ಯಕ್ಕಾದರೂ ನನಗೆ ಮಾಹಿತಿ ನೀಡಿಲ್ಲ. ಭೇಟಿಯಾಗಿಲ್ಲ. ಆತ ಐಜಿ ಸೇರಿ ಎಲ್ಲರಿಗೂ ಲಂಚ ನೀಡಿ ಬಂದಿದ್ದಾನೆ. ನಾನು ಮಾತನಾಡಿದ್ದನ್ನು ರೆಕಾರ್ಡ್ ಮಾಡಿದ್ದಾನೆ. ಈ ಬಗ್ಗೆ ಆತನ ವಿರುದ್ಧ ಹಕ್ಕು ಚ್ಯುತಿ ಮಂಡಿಸುತ್ತೆನೆ. ನಾನು ಠಾಣಾಧಿಕಾರಿಗೆ ಆವಾಜ್ ಹಾಕಿದ್ದು ನಿಜ, ನನ್ನ ಮಾತಿಗೆ ನಾನು ಈಗಲೂ ಬದ್ಧ, ಅತ ಲಂಚ ನೀಡಿ ಬಂದಿದ್ದಾನೆ. ಭ್ರಷ್ಟರು ನನ್ನ ಕ್ಷೆತ್ರದಲ್ಲಿರಬಾರದು ಎಂದು ಸಮರ್ಥನೆ ಮಾಡಿಕೊಂಡಿದ್ದಾರೆ.